6 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ವರ್ಗಾವಣೆ

Update: 2018-08-13 15:54 GMT

ಬೆಂಗಳೂರು, ಆ.13: ರಾಜ್ಯ ಅರಣ್ಯ ಸೇವೆಗೆ ಸೇರಿದ 6 ಮಂದಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಆಡಳಿತ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ತೀರ್ಥಹಳ್ಳಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ- ಕೆ.ಎಸ್.ಭಟ್, ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ-ವಿಜಯ್‌ಕುಮಾರ್, ಸೊರಬ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ-ಶಿವಶರಣಯ್ಯ, ಶಿವಮೊಗ್ಗ ಜಿಲ್ಲೆಯ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ-ಶ್ರೀನಿವಾಸ ಎಸ್.ಯರಡೋಣಿ.

ದಾವಣಗೆರೆ ಜಿಲ್ಲೆಯ ಸಾಮಾಜಿಕ ಅರಣ್ಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ-ಕೆ.ಸಿ.ಆನಂದ್ ಹಾಗೂ ತುಮಕೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ ಎಂ.ಸಿ.ಸುರೇಂದ್ರರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News