ಗಾಂಜಾ ಮಾರಾಟ; ಇಬ್ಬರ ಸೆರೆ

Update: 2018-08-13 15:55 GMT

ಬೆಂಗಳೂರು, ಆ.13: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಇಬ್ಬರನ್ನು ಬಂಧಿಸುವಲ್ಲಿ ಇಲ್ಲಿನ ಆರ್‌ಎಂಸಿ ಯಾರ್ಡ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಪೀಣ್ಯದ ಆಂದ್ರಹಳ್ಳಿಯ ನಿವಾಸಿ ಸದ್ದಾಂ(22), ತಿಗಳರಪಾಳ್ಯದ ಇಮ್ರಾನ್(28) ಬಂಧಿತ ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ.

ಪೆಟ್ಟಿಗೆ ಅಂಗಡಿಯೊಂದರ ಬಳಿ ಇಬ್ಬರು ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಾರೆಂದು ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತರಿಂದ 85 ಸಾವಿರ ಮೌಲ್ಯದ 1.950 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಉಲ್ಲಾಳ ಮಹೇಶ್ ಎಂಬಾತ ಮಾರಾಟ ಮಾಡುತ್ತಿದ್ದಾಗಿ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News