ಶಾಸಕ ಶಾಮನೂರು ಶಿವಶಂಕರಪ್ಪರನ್ನು ಭೇಟಿಯಾದ ಸಚಿವ ಶಿವಶಂಕರರೆಡ್ಡಿ

Update: 2018-08-13 17:32 GMT

ದಾವಣಗೆರೆ,ಆ.13 : ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ಕೃಷಿ ಸಚಿವರಾದ ಶಿವಶಂಕರರೆಡ್ಡಿ ಅವರು ಆಗಮಿಸಿ ಮಾತುಕತೆ ನಡೆಸಿದರು. 

ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದ ಆಗಿರುವ ಅನಾಹುತದಿಂದ ಸಾಕಷ್ಟು ರೈತರು ಅಡಿಕೆ, ತೆಂಗು, ಬಾಳೆ, ಮೆಕ್ಕೆಜೋಳ ಬೆಳೆ ನಾಶವಾಗಿದ್ದು, ನಷ್ಟಕ್ಕೆ ಒಳಗಾಗಿರುವ ರೈತರಿಗೆ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ  ಸಚಿವರಿಗೆ ಮನವಿ ಸಲ್ಲಿಸಿದರು.  

ಶಾಸಕರ ಒತ್ತಾಯ ಪೂರ್ವಕ ಮನವಿಗೆ ಸ್ಪಂದಿಸಿದ ಸಚಿವರು ದಾವಣಗೆರೆ ಜಿಲ್ಲೆಯಲ್ಲಿ ಆಗಿರುವ ನಷ್ಟದ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದ್ಗಲ್ ಮತ್ತಿತರರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News