×
Ad

ಜೂಜಾಟದ ಆರೋಪ: ಮೂವರು ಸೆರೆ

Update: 2018-08-13 23:20 IST

ಬಂಟ್ವಾಳ, ಆ. 13: ಜೂಜಾಟದಲ್ಲಿ ತೊಡಿದ್ದ ಆರೋಪದ ಮೇರೆಗೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಪೆರಾಜೆ ಗ್ರಾಮದ ಪಾಣೂರು ಎಂಬಲ್ಲಿ ರವಿವಾರ ನಡೆದಿದೆ.

ಇಲ್ಲಿನ ನಿವಾಸಿಗಳಾದ ಚಂದ್ರಹಾಸ, ಹರೀಶನಾಯ್ಕ, ತಿಮ್ಮಪ್ಪ ಗೌಡ ಬಂಧಿತ ಆರೋಪಿಗಳು. ದಾಳಿಯ ವೇಳೆ ಉಳಿದ ಆರೋಪಿಗಳಾದ ತಾರಾನಾಥ, ಜಗದೀಶ, ಹರೀಶ ಎಂಬವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೆರಾಜೆ ಗ್ರಾಮದ ಪಾಣೂರು ಎಂಬಲ್ಲಿ ತಂಡವೊಂದು ಜೂಜಾಟದಲ್ಲಿ ತೊಡಿಗಿದ್ದ ಖಚಿತ ಮಾಹಿತಿ ಮೇರೆಗೆ ವಿಟ್ಲ ಠಾಣಾ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1,560 ರೂ. ಹಾಗೂ ಇನ್ನಿತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News