ರಾಜ್ಯದ ಯಾವ ಮೂಲೆಯಲ್ಲಿ ಮೋದಿ ಸ್ಪರ್ಧಿಸಿದರೂ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು: ಯಡಿಯೂರಪ್ಪ

Update: 2018-08-14 14:11 GMT

ಹುಬ್ಬಳ್ಳಿ, ಅ.14: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಯಾವ ಮೂಲೆಯಲ್ಲಿ ಚುನಾವಣೆಗೆ ನಿಂತರೂ 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗೆ ಯಲ್ಲಾಪುರದಲ್ಲಿ ಪ್ರತಿಕ್ರಿಯಿಸಿದ ಅವರು, ಮೋದಿ ಕರ್ನಾಟಕದಿಂದ ಸ್ಪರ್ಧಿಸುವ ವಿಷಯ ನನಗೆ ತಿಳಿದಿಲ್ಲ. ಒಂದು ವೇಳೆ ಅವರು ಸ್ಪರ್ಧಿಸಿದ್ದೇ ಆದರೆ, ಭಾರೀ ಅಂತರದಲ್ಲಿ ಜಯಗಳಿಸಲಿದ್ದಾರೆ ಎಂದು ತಿಳಿಸಿದರು.

ದೇಶದ ಯಾವ ರಾಜ್ಯದಲ್ಲಿ ಚುನಾವಣೆಗೆ ನಿಂತರೂ ತಾನು ಗೆಲ್ಲುವುದಿಲ್ಲ ಎಂಬ ವಿಷಯ ರಾಹುಲ್ ಗಾಂಧಿ ಅವರಿಗೆ ಗೊತ್ತಿದೆ. ಹೀಗಾಗಿ, ಬೀದರ್‌ನಿಂದ ಸ್ಪರ್ಧೆ ಮಾಡಲು ಮುಂದಾಗುತ್ತಿದ್ದಾರೆ. ರಾಹುಲ್ ಗಾಂಧಿ ಕರ್ನಾಟಕ ರಾಜಕೀಯ ಸೇಫ್ ಎಂದು ಭಾವಿಸಿದ್ದಾರೆ. ಕರ್ನಾಟಕದ ಜನರು ರಾಹುಲ್ ಗಾಂಧಿಯನ್ನು ತಿರಸ್ಕರಿಸಲಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News