ಕೆ.ಆರ್.ಪೇಟೆ: ಕಾಲುವೆಯಲ್ಲಿ ಕೊಚ್ಚಿಹೋದ ಮಹಿಳೆ

Update: 2018-08-14 14:49 GMT

ಕೆ.ಆರ್.ಪೇಟೆ,ಆ.14: ತಾಲೂಕಿನ ಶೀಳನೆರೆ ಗ್ರಾಮದ ಬಳಿ ಮಹಿಳೆಯೊಬ್ಬರು ಹೇಮಾವತಿ ನದಿಯಲ್ಲಿ ಕಾಲು ಜಾರಿಬಿದ್ದು ಕೊಚ್ಚಿಹೋಗಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಗ್ರಾಮದ ಶಂಕರೇಗೌಡರ ಪತ್ನಿ ಸುಧಾಮಣಿ(50) ಕೊಚ್ಚಿ ಹೋದ ಮಹಿಳೆಯಾಗಿದ್ದು, ಈಕೆ ಜಮೀನಿನಲ್ಲಿ ಕೃಷಿಕಾರ್ಯ ಮುಗಿಸಿಕೊಂಡು ಕಾಲುವೆಯಲ್ಲಿ ಕೈಕಾಲು ತೊಳೆಯುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News