ಬೆಂಗಳೂರು: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

Update: 2018-08-14 16:37 GMT

ಬೆಂಗಳೂರು, ಆ.14: ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಇಲ್ಲಿನ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಚಾಮರಾಜಪೇಟೆಯ ಜಿಂಕೆ ಪಾರ್ಕ್ ಬಳಿಯಿರುವ ಟೀ ಅಂಗಡಿ ಎದುರು ಕಾಲೇಜು ಮುಗಿಸಿಕೊಂಡು ಸ್ನೇಹಿತರನ್ನು ಭೇಟಿ ಮಾಡಲೆಂದು ನಿಂತಿದ್ದ ಮಂಜುನಾಥ್ (21) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News