ಸ್ವಾತಂತ್ರೋತ್ಸವ ದಿನಾಚರಣೆ: ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Update: 2018-08-15 14:36 GMT

ಉಡುಪಿ, ಆ.15: ಉದ್ಯಾವರ ಲಯನ್ಸ್ ಕ್ಲಬ್ ಸನ್‌ಶೈನ್ ವತಿಯಿಂದ ಎರಡು ತಿಂಗಳ ಹಿಂದೆ ಉದ್ಯಾವರದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಶ್ರಮಿಸಿದ ಮೆಸ್ಕಾಂ ಸಿಬ್ಬಂದಿಗಳನ್ನು ಸನ್ಮಾನಿಸುವ ಮೂಲಕ 72ನೇ ಸ್ವಾತಂತ್ರ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಕ್ಯಾಬಿನೆಟ್ ಜಿಲ್ಲಾ ಕಾರ್ಯದರ್ಶಿ ಸುನಿಲ್ ಸಾಲ್ಯಾನ್, ಉದ್ಯಾವರ ಮೆಸ್ಕಾಂ ಮುಖ್ಯಸ್ಥ ಶಶಿಧರ್ ಶೆಟ್ಟಿ ಮಾತನಾಡಿ ದರು. ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿರುವ ಮೆಸ್ಕಾಂ ಹಿರಿಯರಿಗೆ ಮತ್ತು ಹದಿನಾರು ಸಿಬ್ಬಂದಿಗಳಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಉದ್ಯಾವರ ಲಯನ್ಸ್ ಕ್ಲಬ್ ಸನ್ ಶೈನ್ ಅಧ್ಯಕ್ಷ ಹೆನ್ರಿ ಡಿಸೋಜ ಸ್ವಾಗತಿಸಿ ದರು. ಕಾರ್ಯದರ್ಶಿ ಜೆರಾಲ್ಡ್ ಪಿರೇರಾ ವಂದಿಸಿದರು. ಕೋಶಾಧಿಕಾರಿ ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ದಲ್ಲಿ ಶಂಕರ ಪೂಜಾರಿ, ಹರ್ಷ ಮೈಂದನ್, ಹರೀಶ್ ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News