ಬಿಬಿಎಂಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Update: 2018-08-15 16:22 GMT
ಬೆಂಗಳೂರು, ಆ.15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿ ಅವರಣದಲ್ಲಿ ಮೇಯರ್ ಸಂಪತ್ರಾಜ್ ಧ್ವಜಾರೋಹಣ ನೆರವೇರಿಸಿ, 72ನೆ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಲಕ್ಷಾಂತರ ಜನ ತ್ಯಾಗ, ಬಲಿದಾನ ಮಾಡಿದ್ದಾರೆ. ಆ ಮಹನೀಯರನ್ನು ಸದಾ ನೆನೆಯುತ್ತಾ ದೇಶದ ಪ್ರಗತಿಗೆ ನಾವೆಲ್ಲರೂ ದುಡಿಯಬೇಕಾಗಿದೆ. ಪ್ರಾಂತ್ಯ, ಭಾಷೆ, ಜಾತಿ, ಧರ್ಮಗಳನ್ನು ಮೀರಿ ನಾವೆಲ್ಲರೂ ಭಾರತೀಯರೆಂಬ ಹೆಮ್ಮೆ ನಮಗಿರಲಿ ಎಂದು ಶುಭ ಆರೈಸಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳು, ಶಾಲಾ ಮಕ್ಕಳು ಭಾಗವಹಿಸಿದ್ದರು.