ಬಿಬಿಎಂಪಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2018-08-15 16:22 GMT

ಬೆಂಗಳೂರು, ಆ.15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿ ಅವರಣದಲ್ಲಿ ಮೇಯರ್ ಸಂಪತ್‌ರಾಜ್ ಧ್ವಜಾರೋಹಣ ನೆರವೇರಿಸಿ, 72ನೆ ಸ್ವಾತಂತ್ರ ದಿನಾಚರಣೆ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಲಕ್ಷಾಂತರ ಜನ ತ್ಯಾಗ, ಬಲಿದಾನ ಮಾಡಿದ್ದಾರೆ. ಆ ಮಹನೀಯರನ್ನು ಸದಾ ನೆನೆಯುತ್ತಾ ದೇಶದ ಪ್ರಗತಿಗೆ ನಾವೆಲ್ಲರೂ ದುಡಿಯಬೇಕಾಗಿದೆ. ಪ್ರಾಂತ್ಯ, ಭಾಷೆ, ಜಾತಿ, ಧರ್ಮಗಳನ್ನು ಮೀರಿ ನಾವೆಲ್ಲರೂ ಭಾರತೀಯರೆಂಬ ಹೆಮ್ಮೆ ನಮಗಿರಲಿ ಎಂದು ಶುಭ ಆರೈಸಿದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಹಾಗೂ ಅಧಿಕಾರಿಗಳು, ಶಾಲಾ ಮಕ್ಕಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News