ಶಿವಮೊಗ್ಗ: ರಸ್ತೆ ಅಪಘಾತಕ್ಕೆ ಓರ್ವ ಬಲಿ, ನಾಲ್ವರಿಗೆ ಗಾಯ

Update: 2018-08-15 16:53 GMT

ಶಿವಮೊಗ್ಗ, ಆ. 15: ರಸ್ತೆಗೆ ಅಡ್ಡಲಾಗಿ ಬಂದ ಕಾಡು ಪ್ರಾಣಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಚಾಲನೆಯ ನಿಯಂತ್ರಣ ಕಳೆದುಕೊಂಡ ಚಾಲಕ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಸಮೀಪದ ದರ್ಗಾ ಕ್ರಾಸ್ ಬಳಿ ನಡೆದಿದೆ. 

ಶಂಕರ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಆನಂದ್, ಅಣ್ಣಪ್ಪ, ಕುಮಾರ, ಪ್ರವೀಣ್‍ರವರಿಗೆ ಗಾಯವಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪಿರ್ಯಾದಿದಾರರಾದ ಆನಂದ್‍ರವರು ಸ್ನೇಹಿತರೊಂದಿಗೆ ಮಣಿಪಾಲ್ ಆಸ್ಪತ್ರೆಗೆ ಕಾರಿನಲ್ಲಿ ತೆರಳಿದ್ದರು. ಅಲ್ಲಿಂದ ಆ. 13 ರಂದು ವಾಪಾಸ್ ಶಿವಮೊಗ್ಗ ನಗರಕ್ಕೆ ಹಿಂದಿರುಗುವಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News