ಗೋಕಳ್ಳನೆಂಬ ಶಂಕೆಯಲ್ಲಿ ಓರ್ವನ ಥಳಿಸಿ ಕೊಲೆ: ಮೂವರು ಗಂಭೀರ
Update: 2018-08-16 06:01 GMT
ಗುವಾಹಟಿ, ಆ.16: ಗೋಕಳ್ಳರೆಂಬ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸಿ ಹತ್ಯೆಗೈದಿರುವ ಘಟನೆ ಅಸ್ಸಾಂನ ಬಿಸ್ವನಾಥ್ ಜಿಲ್ಲೆಯಲ್ಲಿ ನಡೆದಿದೆ. ದಾಳಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
“ಟೆಂಪೋ ಟ್ರಾವೆಲರ್ ನಲ್ಲಿ ತೆರಳುತ್ತಿದ್ದ ನಾಲ್ವರ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಅವರು ಗೋಕಳ್ಳರೆಂಬ ಶಂಕೆಯಲ್ಲಿ ದಾಳಿ ನಡೆಸಲಾಗಿತ್ತು” ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವ್ಯಾನ್ ನಿಂದ ಎರಡು ಗೋವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದು, ಸುಮಾರು 20 ಮಂದಿಯಿದ್ದ ತಂಡ ದೊಣ್ಣೆಗಳಿಂದ ದಾಳಿ ನಡೆಸಿತ್ತು ಎನ್ನಲಾಗಿದೆ.