ಮೂಡುಬಿದಿರೆ: ಎಸ್ಕೆಎಸ್ಸೆಸ್ಸೆಫ್‌ನಿಂದ ಫ್ರೀಡಂ ಸ್ಕ್ವಾರ್’ ಕಾರ್ಯಕ್ರಮ

Update: 2018-08-16 11:44 GMT

ಮೂಡುಬಿದಿರೆ, ಆ.16: ಎಸ್ಕೆಎಸ್ಸೆಸ್ಸೆಫ್ ಮೂಡುಬಿದಿರೆ ವಲಯ ಸಮಿತಿಯ ವತಿಯಿಂದ ‘ಫ್ರೀಡಂ ಸ್ಕ್ವಾರ್’ ಕಾರ್ಯಕ್ರಮವು ಹಂಡೇಲು ಮಸೀದಿಯ ವಠಾರದಲ್ಲಿ ಬುಧವಾರ ಜರುಗಿತು.

ಕಾರ್ಯಕ್ರಮಕ್ಕೆ ಹಂಡೇಲು ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಹನೀಫ್ ಫೈಝಿ ದುಆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಎಸ್ಕೆಎಸ್ಸೆಸ್ಸೆಫ್ ಮೂಡುಬಿದಿರೆ ವಲಯಾಧ್ಯಕ್ಷ ಮಾಲಿಕ್ ಅಬ್ದುಲ್ ಅಝೀಝ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಮೂಡುಬಿದಿರೆ ಟೌನ್ ಜುಮಾ ಮಸೀದಿಯ ಖತೀಬ್ ಮುಸ್ತಫಾ ಯಮಾನಿ ಕಾರ್ಯಕ್ರಮ ಉದ್ಘಾಟಿಸಿದರು.

ಹೊಸ್ಮಾರಿನ ವಿಖ್ಯಾತಾನಂದ ಸ್ವಾಮೀಜಿ ಬಲ್ಯೋಟ್ಟು, ಮಡಂತ್ಯಾರು ಚರ್ಚ್‌ನ ಧರ್ಮಗುರು ರೆ.ಫಾ. ಬಾಝಿಲ್ ವಾಸ್ ಹಾಗೂ ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಸದಸ್ಯ ಇಸ್ಹಾಕ್ ಫೈಝಿ ಕುಕ್ಕಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಹಂಡೇಲು ಜುಮಾ ಮಸೀದಿಯ ಅಧ್ಯಕ್ಷ ಎಚ್.ಎಂ.ಅಬ್ದುಲ್ ಖಾದರ್, ಎಸ್ಕೆಎಸ್ಸೆಸ್ಸೆಫ್ ಮೂಡುಬಿದಿರೆ ವಲಯ ಕೋಶಾಧಿಕಾರಿ ಯು.ಕೆ.ಮುಹಮ್ಮದ್, ಉದ್ಯಮಿ ಅಬುಲ್ ಅಲಾ ಪುತ್ತಿಗೆ, ಎಸ್ಕೆಎಸ್ಸೆಸ್ಸೆಫ್ ಕೇಂದ್ರ ಸಮಿತಿಯ ಸದಸ್ಯ ಹಕೀಂ ಪರ್ತಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಎಸ್ಕೆಎಸ್ಸೆಸ್ಸೆಫ್ ಮೂಡುಬಿದಿರೆ ವಲಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಫಾರೂಕ್ ಸ್ವಾಗತಿಸಿದರು. ಶಬ್ಬೀರ್ ಅಹ್ಮದ್ ಹಂಡೇಲು ವಂದಿಸಿದರು. ಶಾಫಿ ಪಡ್ಡಂದಡ್ಕ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News