ವಾಜಪೇಯಿ ನಿಧನ: ರಾಜ್ಯಾದ್ಯಂತ ಆ.17 ರಂದು ಶಾಲಾ ಕಾಲೇಜುಗಳಿಗೆ ರಜೆ

Update: 2018-08-16 15:27 GMT

ಬೆಂಗಳೂರು, ಆ.16: ಮಾಜಿ ಪ್ರಧಾನಮಂತ್ರಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತ ಪಡಿಸಿರುವ ಕರ್ನಾಟಕ ಸರ್ಕಾರ ಆಗಸ್ಟ್ 16 ರಿಂದ 22 ರ ವರೆಗೆ ರಾಜ್ಯದಾದ್ಯಂತ 7 ದಿನಗಳ ಶೋಕಾಚರಣೆ ಘೋಷಿಸಿದೆ.

ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು. 

ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಇರುವ ಕಾರಣ ತುರ್ತು ಪರಿಸ್ಥಿತಿ ನಿಭಾಯಿಸುವ ಹಾಗೂ ಪರಿಹಾರ ಒದಗಿಸುವ ಕಾರ್ಯಾಚರಣೆಯಲ್ಲಿ ತೊಡಗಿರುವವರನ್ನು ಹೊರತು ಪಡಿಸಿ ಉಳಿದವರಿಗೆ ಅನ್ವಯಿಸುವಂತೆ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ 
ಆಗಸ್ಟ್ 17 ರಂದು ಒಂದು ದಿನ ರಜೆ ಘೋಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News