ಪ್ರಾಕೃತಿಕ ವಿಕೋಪ: ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆ

Update: 2018-08-16 15:50 GMT

ಮಂಗಳೂರು, ಆ.16: ದ.ಕ. ಜಿಲ್ಲೆಯಲ್ಲಿ ತೀವ್ರ ಮಳೆಯಾಗಿ, ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುವ ಹಿನ್ನೆಲೆ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವರೊಂದಿಗೆ ಸಭೆ ನಡೆಸಿದರು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ಸಚಿವ ಖಾದರ್, ಮುಖ್ಯಮಂತ್ರಿಗೆ ದ.ಕ. ಜಿಲ್ಲೆಯಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪಗಳ ಬಗ್ಗೆ ಮುಖ್ಯಮಂತ್ರಿಗೆ ಮನವರಿಕೆ ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪ ದುರಂತಗಳ ನಿರ್ವಹಣೆಗೆ 200 ಕೋಟಿ ರೂ. ನೆರವನ್ನು ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದು, ಈ ಪೈಕಿ ದ.ಕ. ಜಿಲ್ಲೆಗೆ 50 ಕೋಟಿ ರೂ. ಬಿಡುಗಡೆಯಾಗಲಿದೆ. ಇನ್ನಷ್ಟು ನೆರವು ನೀಡಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News