ಮದ್ರಸಾಗಳಲ್ಲಿ ರಾಷ್ಟ್ರಗೀತೆ ಹಾಡಲು ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

Update: 2018-08-16 17:04 GMT

 ಲಕ್ನೊ, ಆ.16: ಉತ್ತರಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ಮದ್ರಸಾದಲ್ಲಿ ರಾಷ್ಟ್ರಗೀತೆ ಹಾಡದಂತೆ ಮಕ್ಕಳಿಗೆ ತಡೆಯೊಡ್ಡಿದ ಆರೋಪದಲ್ಲಿ ಧರ್ಮಗುರು ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದ್ರಸಾ ಅರೇಬಿಯ ಆಹ್ಲೆ ಬಾಲಕಿಯರ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳು ಸ್ವಾತಂತ್ರೋತ್ಸವದಂದು ರಾಷ್ಟ್ರಧ್ವಜಾರೋಹಣಕ್ಕೆ ಸಿದ್ಧರಾಗಿದ್ದರು. ಈ ಸಂದರ್ಭ ಮದ್ರಸಾಕ್ಕೆ ಸಂಬಂಧಿಸದ ಧರ್ಮಗುರು ಜುನೇದ್ ಅನ್ಸಾರಿ ರಾಷ್ಟ್ರಗೀತೆ ಹಾಡದಂತೆ ತಡೆಯುತ್ತಿರುವ ಘಟನೆಯ ವೀಡಿಯೊ ದೃಶ್ಯಾವಳಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿ ಅನ್ಸಾರಿ ಹಾಗೂ ಇತರ ಇಬ್ಬರು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ . ಅನ್ಸಾರಿಯನ್ನು ಬುಧವಾರ ಬಂಧಿಸಲಾಗಿದ್ದು ಇತರ ಇಬ್ಬರು ಆರೋಪಿಗಳಿಗೆ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News