ಅಲೆವೂರು ಶೇಖರ ಪೂಜಾರಿ

Update: 2018-08-17 15:16 GMT

ಉಡುಪಿ, ಆ.17: ಅಲೆವೂರಿನಲ್ಲಿ ಪರಿಸರದಲ್ಲಿ ‘ಶೇಖರಣ್ಣ’ ಎಂದೇ ಚಿರಪರಿಚಿತರಾಗಿದ್ದು, ಇಂದಿರಾಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ, ರಾಜೀವಗಾಂಧಿ ಶಿರೋಮಣಿ ಪ್ರಶಸ್ತಿ, ಏಶ್ಯಾ ಫೆಸಿಫಿಕ್ ಎಕ್ಸಲೆನ್ಸಿ ಪ್ರಶಸ್ತಿ, ಶ್ರೀ ಗಣೇಶಾನುಗ್ರಹ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅಲೆವೂರು ಶೇಖರ ಪೂಜಾರಿ (52) ಇವರು ಗುರುವಾರ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾಗಿದ್ದ ಅವರು ಅಲೆವೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಅಲೆವೂರು ಗ್ರಾಮೀಣ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು, ನಾರಾಯಣಗುರು ಕಟ್ಟಡ ಸಮಿತಿ ಗೌರವಾಧ್ಯಕ್ಷರು, ಕುಕ್ಕಿಕಟ್ಟೆಯ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News