ಬೆಂಗಳೂರು: ಶಿಕ್ಷಕಿಯ ಸ್ಕೂಟರ್‌ಗೆ ಢಿಕ್ಕಿ ಹೊಡೆದು ಕಳ್ಳತನ

Update: 2018-08-17 17:26 GMT

ಬೆಂಗಳೂರು, ಆ.17: ಶಾಲಾ ಶಿಕ್ಷಕಿಯ ಸ್ಕೂಟರ್‌ಗೆ ಢಿಕ್ಕಿ ಹೊಡೆದ ದುಷ್ಕರ್ಮಿಗಳಿಬ್ಬರು, ಶಿಕ್ಷಕಿ ಬಳಿಯಿದ್ದ ಬ್ಯಾಗ್ ಕಳವು ಮಾಡಿರುವ ಘಟನೆ ಇಲ್ಲಿನ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮಾರಗೊಂಡನಹಳ್ಳಿ ನಿವಾಸಿ ಜಗದೀಶ್ವರಿ ಎಂಬುವರು ಶಾಲಾ ಶಿಕ್ಷಕಿಯಾಗಿದ್ದು, ಗುರುವಾರ ರಾತ್ರಿ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಗುರುವಾರ ರಾತ್ರಿ 7ಗಂಟೆ ಸಮಯದಲ್ಲಿ ತಮ್ಮ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಹೊರಮಾವು ಕಡೆಗೆ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಇವರ ಸ್ಕೂಟಿಗೆ ಢಿಕ್ಕಿ ಹೊಡೆದಿದ್ದಾರೆ. ಬಳಿಕ ಜಗದೀಶ್ವರಿ ಅವರು ತಮ್ಮ ವಾಹನ ನಿಲ್ಲಿಸುತ್ತಿದ್ದಂತೆ ಬ್ಯಾಗ್ ಕಸಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಬ್ಯಾಗ್‌ನಲ್ಲಿ 7ಸಾವಿರ ನಗದು, ಕೆಲವು ದಾಖಲೆಗಳು ಇದ್ದವು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಈ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News