ಹೆಚ್ಚುವರಿ ಸೇನಾ ಸಿಬ್ಬಂದಿ ನಿಯೋಜನೆ: ಮುಖ್ಯಮಂತ್ರಿ ಮನವಿಗೆ ಸ್ಪಂದಿಸಿದ ರಕ್ಷಣಾ ಸಚಿವೆ

Update: 2018-08-17 18:04 GMT

ಬೆಂಗಳೂರು, ಆ.17: ಅತಿವೃಷ್ಟಿ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ಗೆ ಹೆಚ್ಚುವರಿ ಸೇನಾ ಸಿಬ್ಬಂದಿ ಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮತಿ ಸೂಚಿಸಿದ್ದಾರೆ.

ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿಗಳು ಭೂಸೇನೆಯ ಸಿಬ್ಬಂದಿ ಹಾಗೂ ವಾಯುಪಡೆಯ ಹೆಲಿಕಾಪ್ಟರ್ ಗಳ ಮೂಲಕ ಈಗಾಗಲೇ ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಜಿಲ್ಲೆಯ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸಿದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಅಲ್ಲದೆ ಜಿಲ್ಲೆಯ ಪರಿಸ್ಥಿತಿ ಯನ್ನು ಅವಲೋಕಿಸಲು ವೈಮಾನಿಕ ಸಮೀಕ್ಷೆ ನಡೆಸಲು ವಾಯುಪಡೆಯ ಹೆಲಿಕಾಪ್ಟರ್ ಒಡಗಿಸುವಂತೆಯೂ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News