ಆ.18, 19: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದಿಂದ ರಾಷ್ಟ್ರೀಯ ಸಮಾವೇಶ

Update: 2018-08-17 18:14 GMT

ಬೆಂಗಳೂರು, ಆ.17: ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಆ.18, 19ರಂದು ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿ ಆಶ್ರಮದಲ್ಲಿ 71ನೆ ರಾಷ್ಟ್ರೀಯ ಮಂಡಳಿ ಸಮಾವೇಶ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಂಜೆ 3ಕ್ಕೆ ‘ಸಮ್ಮಿಶ್ರ ಸರಕಾರವೋ ಏಕೈಕ ಪಕ್ಷಾಡಳಿತವೋ’ ಯಾವುದು ನಮಗೆ ಅತ್ಯುತ್ತಮ ಎಂಬ ವಿಷಯ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ವಸತಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.

ಆ.19ರಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಮಾರೋಪ ಭಾಷಣ ಮಾಡಲಿದ್ದಾರೆ. ಈ ವೇಳೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ವಿದೇಶಿ ಪತ್ರಕರ್ತರಿಗೆ ಗೌರವ ಸಲ್ಲಿಸಲಿದ್ದಾರೆ. ಈ ವೇಳೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಕೆಯಡಿಬ್ಲೂಜಿ ಅಧ್ಯಕ್ಷ ಎನ್.ರಾಜು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News