ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಮುಖ್ಯರಸ್ತೆಗಳಲ್ಲಿ ಘನ ವಾಹನಗಳ ಸಂಚಾರ ನಿಷೇಧ

Update: 2018-08-18 13:33 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಆ.18: ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯರಸ್ತೆಗಳಲ್ಲಿ 15 ಎಂ.ಟಿ ಗಿಂತ ಅಧಿಕ ಭಾರ ಹೊತ್ತ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಗಡಗಳು ಸಂಭವಿಸುತ್ತವೆ. ಜನ, ಜಾನುವಾರುಗಳ ಹಾನಿ ತಡೆಗಟ್ಟಲು ಸಂಪರ್ಕ ವ್ಯವಸ್ಥೆ ಸುಗಮವಾಗಿ ನೋಡಿಕೊಳ್ಳುವ ದೃಷ್ಟಿಯಿಂದ ಈ ರಸ್ತೆಗಳಲ್ಲಿ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಅತ್ಯಾವಶ್ಯಕವಾಗಿರುವುದರಿಂದ ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ಅಧಿಕ ಭಾರ ಹೊತ್ತು ಸಂಚರಿಸುವ ಎಲ್ಲಾ ರೀತಿಯ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News