ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಮೂವರ ಬಂಧನ

Update: 2018-08-18 16:23 GMT

ಬೆಂಗಳೂರು, ಆ.18: ಹಣಕಾಸಿನ ವಿಚಾರ ಸಂಬಂಧ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಇಲ್ಲಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ನಗರದ ಪುನಿತ್, ರಾಜೇಶ್ ಮತ್ತು ಅಭಿಷೇಕ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿಗೆ ಶ್ರೀನಿವಾಸನಗರದಲ್ಲಿ ಸತೀಶ್ ಎಂಬಾತನ ಕೊಲೆ ಯತ್ನಿಸಿದಲ್ಲದೆ, ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿ ನಿವಾಸಿ ಅವಿನಾಶ್ ಗೌಡ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು. ಈ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News