ಗಾಂಜಾ ಸಾಗಾಟ: ಓರ್ವನ ಬಂಧನ

Update: 2018-08-18 17:23 GMT

ಪುತ್ತೂರು, ಆ. 18: ಅಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ರಿಕ್ಷಾ ಚಾಲಕನೊಬ್ಬನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು ತಾಲೂಕಿನ ಸವಣೂರು ಸಮೀಪದ ಇಡ್ಯಾಡಿ ನಿವಾಸಿ ಪ್ರಸಾದ್ ಬಂಧಿತ ಆರೋಪಿ. ಈತ ಸ್ವತಃ ಗಾಂಜಾ ಸೇವನೆ ಮಾಡಿಕೊಂಡಿದ್ದು, ತನ್ನ ಆಟೋ ರಿಕ್ಷಾದಲ್ಲಿ ಗಾಂಜಾ ಶೇಖರಿಸಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ನಗರದ ದರ್ಬೆ ಜಂಕ್ಷನ್ ಬಳಿಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಎಸ್‌ಐ ಅಜಯ್ ಕುಮಾರ್ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ ವಶಕ್ಕೆ ತೆಗೆದುಕೊಂಡಿದೆ. ಠಾಣೆಗೆ ಕರೆತಂದು ವಿಚಾರಿಸಿದಾಗ ಪ್ರಸಾದ್ ಗಾಂಜಾ ಸೇವಿಸಿದ್ದು ಬೆಳಕಿಗೆ ಬಂತು. ಆತ ನೀಡಿದ ಮಾಹಿತಿಯಂತೆ ಪರಿಶೀಲನೆ ನಡೆಸಿದಾಗ ರಿಕ್ಷಾದ ಸೀಟಿನ ಕೆಳಗೆ ಸಣ್ಣ ಪೊಟ್ಟಣದಲ್ಲಿ ಗಾಂಜಾ ಇಟ್ಟಿದ್ದು ಬೆಳಕಿಗೆ ಬಂದಿದೆ. 40 ಗ್ರಾಂ ಗಾಂಜಾ ವಶಪಡಿಕೊಂಡು, ಆಟೋ ರಿಕ್ಷಾ ಸ್ವಾದೀನಪಡಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ.

ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News