ಕೊಡಗು ಪರಿಸ್ಥಿತಿಯ ಮಾಹಿತಿ ಪಡೆದ ರಾಷ್ಟ್ರಪತಿ
Update: 2018-08-19 08:02 GMT
ಬೆಂಗಳೂರು, ಆ.19: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೂರವಾಣಿ ಕರೆ ಮಾಡಿ ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತು ಮಾಹಿತಿ ಪಡೆದರು.
ಕೊಡಗು ಜಿಲ್ಲಾಡಳಿತವು ರಕ್ಷಣೆ ಹಾಗೂ ಪರಿಹಾರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತಿತರ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು ಇದುವರೆಗೆ 3,500ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ರಾಷ್ಟ್ರಪತಿಯವರಿಗೆ ಮಾಹಿತಿ ನೀಡಿದರು.
ರಾಷ್ಟ್ರಪತಿ ಕರೆಮಾಡಿ ತೋರಿದ ಕಾಳಜಿಗೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು.