ಕೊಡಗು ಪರಿಸ್ಥಿತಿಯ ಮಾಹಿತಿ ಪಡೆದ ಪ್ರಧಾನಿ ಮೋದಿ

Update: 2018-08-19 13:25 GMT

ಬೆಂಗಳೂರು,ಆ.19: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ಕೊಡಗು ಜಿಲ್ಲೆಯ ಸ್ಥಿತಿ ಗತಿ ಹಾಗೂ ಪರಿಹಾರ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದು ಕೇಂದ್ರ ಸರ್ಕಾರವು ರಕ್ಷಣೆಗೆ ಹಾಗೂ ಪರಿಹಾರ ಕಾರ್ಯಗಳಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಸೇನಾ ಸಿಬ್ಬಂದಿ, ಎನ್ ಡಿ ಆರ್ ಎಫ್ ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News