ಗಾಂಜಾ ಸೇವನೆ: ಓರ್ವನ ಬಂಧನ

Update: 2018-08-19 17:14 GMT

ಮಂಗಳೂರು, ಆ.19: ಪಣಂಬೂರು ಕೆಐಒಸಿಎಲ್ ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡುತ್ತಿರುವ ಆರೋಪದ ಮೇಲೆ ಕಸಬಾ ಬೆಂಗ್ರೆ ನಿವಾಸಿ ಅಕ್ರಂ ಯಾನೆ ಭೋಜ ಅಕ್ರಂ(25) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಣಂಬೂರು ಠಾಣಾ ಎಸ್ಸೈ ಉಮೇಶ್‌ಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಮೇಲೆ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಪಾಂಡೇಶ್ವರ, ಉಳ್ಳಾಲ ಹಾಗೂ ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ದಸ್ತಗಿರಿ ವಾರೆಂಟ್ ಬಾಕಿಯಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್, ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ರಾಜೇಂದ್ರ ಡಿಎಸ್. ಮಾರ್ಗದರ್ಶನದಲ್ಲಿ ಪಣಂಬೂರು ಇನ್‌ಸ್ಪೆಕ್ಟರ್ ರಫೀಕ್ ಕೆ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News