ಹಾಸನ: ಜಿಲ್ಲಾಡಳಿತದಿಂದ 103ನೇ ಅರಸು ಜನ್ಮ ದಿನಾಚರಣೆ

Update: 2018-08-20 12:19 GMT

ಹಾಸನ,ಆ.20 ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಿಧನರಾದ ಹಿನ್ನಲೆಯಲ್ಲಿ ಏಳು ದಿನ ಶೋಕಾಚರಣೆ ಇರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಿವಂಗತ ಡಿ. ದೇವರಾಜ ಅರಸು ಅವರ 103ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಜ್ಯೋತಿ ಬೆಳಗಿ ಪುಷ್ಪ ಅರ್ಪಿಸುವುದರ ಮೂಲಕ ಸರಳವಾಗಿ ಆಚರಿಸಿದರು.

ಇದೇ ವೇಳೆ ಎರಡು ನಿಮಿಷ ಮೌನ ಆಚರಿಸುವುದರ ಮೂಲಕ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಅರ್ಪಿಸಿದರು. ನಂತರ ಯಾವುದೇ ಭಾಷಣ ಮಾಡದೆ ಕಾರ್ಯಕ್ರಮವನ್ನು ಮೊಟಕುಗೊಳಿಸಿದರು. 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಪಟೇಲ್ ಶಿವಣ್ಣ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News