ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2018-08-20 13:24 GMT

ಹುಬ್ಬಳ್ಳಿ,ಆ.20: ಸ್ಕೂಟಿಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಣಕಲ್ ಕೆರೆ ಬಳಿ ನಡೆದಿದೆ. 

ಮೃತ ಯುವಕನನ್ನು ಶೇಖ್ ಉಮರ್ ಕಿತ್ತೂರು(26) ಎಂದು ಗುರುತಿಸಲಾಗಿದೆ. ಸ್ಕೂಟಿಗೆ ಲಾರಿಯು ಹಿಂದಿನಿಂದ ಢಿಕ್ಕಿ ಹೊಡೆದಿದ್ದು, ಇದರಿಂದಾಗಿ ಕೆಳಗೆ ಬಿದ್ದ ಶೇಖ್ ಉಮರ್ ತಲೆಯ ಮೇಲೆ ಲಾರಿ ಹರಿದಿದೆ. ಪರಿಣಾಮ ಯುವಕನ ಮುಖ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ನಡೆಯುತ್ತಿದ್ದಂತೆ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.‌ ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News