ಸಿಎಂ ಪರಿಹಾರ ನಿಧಿಗೆ ನೆರವು ನೀಡಲು ಕೋರಿಕೆ

Update: 2018-08-20 14:49 GMT

ಬೆಂಗಳೂರು, ಆ. 20: ಸತತ ಮಳೆ, ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ನಿರಾಶ್ರಿತರಿಗೆ ನೆರವು ನೀಡಲು ಇಚ್ಛಿಸುವವರು ಸಿಎಂ ಪರಿಹಾರ ನಿಧಿಗೆ ಆನ್‌ಲೈನ್ ಮೂಲಕ ಹಣ ಪಾವತಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

ನಿರಾಶ್ರಿತರಿಗೆ ರಾಜ್ಯ ಸರಕಾರ ಅಗತ್ಯ ಪುನರ್ವಸತಿ ಕಲ್ಪಿಸಿದೆ. ಈ ಮಧ್ಯೆ ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರವೆ ಹರಿದು ಬರುತ್ತಿದೆ. ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಧನ ಸಹಾಯ ಮಾಡಲು ಇಚ್ಛಿಸುವ ದಾನಿಗಳು ಸಿಎಂ ಪರಿಹಾರ ನಿಧಿಗೆ ನೆರವು ನೀಡಬಹುದು.

‘ಮುಖ್ಯಮಂತ್ರಿ ಪರಿಹಾರ ನಿಧಿ’, ಖಾತೆ ಸಂಖ್ಯೆ: 3788 7098 605, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವಿಧಾನಸೌಧ ಶಾಖೆ-ಬೆಂಗಳೂರು, ಐಎಫ್‌ಎಸ್‌ಸಿ ಕೊಡ್-0040277, ಎಂಐಸಿಆರ್-ಸಂಖ್ಯೆ- 5600 02419 ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News