ಉಡುಪಿ: ಮಸೀದಿಗಳಲ್ಲಿ ನಿಧಿ ಸಂಗ್ರಹಕ್ಕೆ ಕರೆ
Update: 2018-08-20 17:18 GMT
ಉಡುಪಿ, ಆ.20: ಈ ಬಾರಿಯ ಬಕ್ರೀದ್ ಹಬ್ಬದ ದಿನ ಉಡುಪಿ ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಕೊಡಗು ಜಿಲ್ಲೆಯ ಸಂತ್ರಸ್ತರಿಗೆ ನಿಧಿ ಸಂಗ್ರಹಿಸುವಂತೆ ಉಡುಪಿ ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಕರೆ ನೀಡಿದ್ದಾರೆ.
ಸಂಗ್ರಹಿಸಿದ ನಿಧಿಯನ್ನು ಸಂಯುಕ್ತ ಜಮಾಅತಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ.ಬಾವು(984512 2968) ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.