ಮಾಜಿ ಸಚಿವೆ ಮಂಜು ವರ್ಮಾ, ಪತಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು
Update: 2018-08-20 17:45 GMT
ಮುಝಫ್ಫರ್ಪುರ, ಆ.20: ಬಿಹಾರದ ಮಾಜಿ ಸಾಮಾಜಿಕ ಕಲ್ಯಾಣ ಸಚಿವೆ ಮಂಜು ವರ್ಮಾ ಹಾಗೂ ಆಕೆಯ ಪತಿ ಚಂದ್ರಕಾಂತ್ ವರ್ಮಾ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮುಝಫ್ಫರ್ಪುರ ಮಕ್ಕಳ ಆಶ್ರಮದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ಮಾ ದಂಪತಿ ವಿರುದ್ಧ ದೂರು ದಾಖಲಿಸಲಾಗಿದೆ. ವರ್ಮಾ ಅವರ ಬೆಗುಸರಾಯಿಯಲ್ಲಿರುವ ನಿವಾಸ ಸೇರಿದಂತೆ ಹನ್ನೆರಡು ಕಡೆಗಳಲ್ಲಿ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು 50 ಕಾಟ್ರಡ್ಜ್ಗಳನ್ನು ವಶಪಡಿಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬ್ರಿಜೇಶ್ ಠಾಕೂರ್ ಜೊತೆ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ಬಿಹಾರ ಸಚಿವ ದಾಮೋದರ್ ರಾವತ್ ಅವರನ್ನೂ ಸಿಬಿಐ ಪ್ರಶ್ನಿಸಿತ್ತು. ಬಿಹಾರದ ಮಕ್ಕಳ ಆಶ್ರಮದಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಮಂಜು ವರ್ಮಾ ಪತಿ ಶಾಮೀಲಾಗಿರುವ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಆಕೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.