ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ: ಇಬ್ಬರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
Update: 2018-08-21 13:08 GMT
ಬೆಂಗಳೂರು, ಆ.21: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಬೆನ್ನಲ್ಲೇ ರಾಜ್ಯದ ಆರು ಕಡೆ ಏಕಕಾಲದಲ್ಲಿ ಇಬ್ಬರು ಸರಕಾರಿ ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿ, ಪರಿಶೀಲನೆ ಕಾರ್ಯ ಮುಂದುವರೆಸಿದೆ.
ಮಂಗಳವಾರ ದಾವಣಗೆರೆಯ ಮಲೆಬೆನ್ನೂರು ಶಾಖೆಯ ಜಿಲ್ಲಾ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ಕೆ.ಭೀಮನಗೌಡ ಎಂಬವರ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದ ಎಸಿಬಿ ತನಿಖಾಧಿಕಾರಿಗಳು, ಆಸ್ತಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅದೇ ರೀತಿ, ಶಿಕಾರಿಪುರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಫ್ಡಿಎ ಎ.ಚಿನ್ನಪ್ಪ ಎಂಬುವರ ಜಕ್ಕನಹಳ್ಳಿಯ ಜಯಲಕ್ಷ್ಮಿ ಫಾರಂ ಮನೆ ಸೇರಿ ಒಟ್ಟು ಕಡೆ ಎಸಿಬಿ ದಾಳಿ ನಡೆಸಿ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಮುಂದುವರಸಿದೆ ಎಂದು ಪ್ರಕಟನೆ ತಿಳಿಸಿದೆ.