ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಫೋಟದ ಬೆದರಿಕೆ ಕರೆ
Update: 2018-08-21 13:20 GMT
ಬೆಂಗಳೂರು, ಆ.21: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಫೋಟ ಮಾಡುವುದಾಗಿ ಬೆದರಿಕೆ ಕರೆಯೊಂದುಬಂದಿದ್ದು, ಅಧಿಕಾರಿಗಳು ಆಂತಕಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ಟರ್ಮಿನಲ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದ ದುಷ್ಕರ್ಮಿಗಳು, ಸೋಮವಾರ ರಾತ್ರಿ 12 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಆಗುತ್ತೆ ಎಂದಿದ್ದಾರೆ. ಇದರಿಂದ ಭಯಗೊಂಡ ಅಧಿಕಾರಿಗಳು ಕೂಡಲೇ ತಪಾಸಣೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತಸ ಮಾಡಲಾಗಿದೆ.
ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು, ಕರೆ ಮಾಡಿದ ಕಿಡಿಗೇಡಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.