ವಿವಿಧ ಹುದ್ದೆಗಳಲ್ಲಿ ಪಿಡಿಓಗಳು: ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ

Update: 2018-08-21 13:57 GMT

ಉಡುಪಿ, ಆ.21: ಬೇರೆ ಬೇರೆ ಹುದ್ದೆಗಳಲ್ಲಿ ಕಾನೂನು ಬಾಹಿರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿಡಿಓಗಳನ್ನು ತಮ್ಮ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸಿಕೊಳ್ಳುವಂತೆ ಆದೇಶ ನೀಡಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಸಮತಾ ಸೈನಿಕ ದಳವು ರಾಜ್ಯ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಿದೆ.

ಸೋಮವಾರ ಉಡುಪಿಗೆ ಆಗಮಿಸಿದ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ರಾಜ್ಯಾದ್ಯಂತ ಸುಮಾರು 6,600 ಪಿಡಿಓಗಳಲ್ಲಿ 4,400 ಪಿಡಿಓ ಅವರನ್ನು ಅನೇಕ ಶಾಸಕರು, ಸಂಸದರು ಹಾಗೂ ವಿವಿಧ ಇಲಾಖಾಧಿಕಾರಿಗಳು ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸಿಕೊಂಡಿರುವುದು ಸಂವಿಧಾನ ಬಾಹಿರವಾಗಿದೆ. ತಕ್ಷಣವೇ ಪಿಡಿಓರನ್ನು ಅವರ ಹುದ್ದೆಯಲ್ಲಿಯೇ ಮುಂದುವರಿಯುವಂತೆ ಸಂಬಂಧ ಪಟ್ಟವರಿಗೆ ಲಿಖಿತ ಆದೇಶ ನೀಡಬೇಕು ಎಂದು ಸಂಘಟನೆಯು ಒತ್ತಾಯಿಸಿದೆ.

 ಈ ಸಂದರ್ಭದಲ್ಲಿ ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿಶ್ವನಾಥ ಪೇತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಡುರ್, ಪ್ರವೀಣ್ ಶಿರಿಯಾರ, ಮೋಹನ್ ಅಂಬಾಗಿಲು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News