ಕೇಂದ್ರ ಸಚಿವ ತೋಮರ್ ಆಪ್ತಸಹಾಯಕ ಆತ್ಮಹತ್ಯೆ
Update: 2018-08-21 14:46 GMT
ಹೊಸದಿಲ್ಲಿ,ಆ.21: ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಆಪ್ತ ಸಹಾಯಕರಾಗಿದ್ದ ಕುಂದನ ಕುಮಾರ್(31) ಮಂಗಳವಾರ ಬೆಳಗಿನ ಜಾವ ಇಲ್ಲಿಯ ಲಕ್ಷ್ಮಿಬಾಯಿ ನಗರದಲ್ಲಿನ ನಿವಾಸದಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ ಪತ್ನಿ ಮತ್ತು ಆರು ತಿಂಗಳ ಮಗುವನ್ನು ಅಗಲಿದ್ದಾರೆ.
ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಚೀಟಿ ಪತ್ತೆಯಾಗಿಲ್ಲ ಎಂದು ಸರೋಜಿನಿ ನಗರ ಪೊಲೀಸರು ತಿಳಿಸಿದ್ದಾರೆ.