ವಾಜಪೇಯಿ ಅಸ್ಥಿಕಲಶ ಬೆಂಗಳೂರಿಗೆ

Update: 2018-08-22 10:36 GMT

ಬೆಂಗಳೂರು, ಆ.22: ಹೊಸದಿಲ್ಲಿಯಲ್ಲಿ ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಮತ್ತು ಅಟಲ್ ಜೀ ಕುಟುಂಬದ ಸದಸ್ಯರಿಂದ ಮಾಜೀ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಕಲಶವನ್ನು ಸ್ವೀಕರಿಸಿದರು.

ಇಂದು ಸಂಜೆ ಅಸ್ಥಿಕಲಶವನ್ನು ಬೆಂಗಳೂರಿಗೆ ತರಲಾಗುತ್ತಿದ್ದು  ಅಂ.ರಾ.ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಸ್ವಾಗತಿಸುವರು.ನಂತರ   ರಾಜ್ಯ ಬಿಜೆಪಿ ಕಾರ್ಯಾಲಯದ ವರೆಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಅಸ್ಥಿಕಲಶವನ್ನು ಮೆರವಣಿಗೆಯಲ್ಲಿ ತರಲಿದ್ದಾರೆ.ನಂತರ ಇಂದು ರಾತ್ರಿಯ ವರೆಗೆ ಪಕ್ಷದ ಕಾರ್ಯಾಲಯದಲ್ಲಿ ಪುಷ್ಪಾರ್ಚನೆ ಮಾಡಲಾಗುವುದು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News