ನನ್ನ ಪುತ್ರ ಅಮಾಯಕ, ಯಾವುದೇ ತಪ್ಪು ಮಾಡಿಲ್ಲ: ಬಂಧಿತ ಆರೋಪಿ ಅಮಿತ್ ತಾಯಿ ಜಯಶ್ರೀ

Update: 2018-08-23 14:37 GMT

ಹುಬ್ಬಳ್ಳಿ, ಆ. 23: ‘ನನ್ನ ಮಗ ಅಮಾಯಕ, ಆತ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಸಾಕ್ಷಾಧಾರಗಳಿಲ್ಲದೆ ಆತನನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಬಂಧಿತ ಆರೋಪಿ ಅಮಿತ್ ಬದ್ದಿ ತಾಯಿ ಜಯಶ್ರೀ ದೂರಿದ್ದಾರೆ.

ಗುರುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೂ ನನ್ನ ಮಗನಿಗೂ ಯಾವುದೇ ಸಂಬಂಧವಿಲ್ಲ. ಆದರೂ ಆತನನ್ನು ಸಿಟ್ ಪೊಲೀಸ್ ವಿನಾಕಾರಣ ಬಂಧಿಸಿ, ಕಿರುಕುಳ ನೀಡಲಾಗುತ್ತಿದೆ. ಇದರಿಂದ ನಮ್ಮ ಕುಟುಂಬಕ್ಕೆ ಆಘಾತ ಉಂಟಾಗಿದೆ ಎಂದು ಹೇಳಿದರು.

ನಮ್ಮ ಪುತ್ರನ ಬಂಧನದಿಂದ ನಮ್ಮ ಕುಟುಂಬ ಸಮಾಜದಲ್ಲಿ ತಲೆ ಎತ್ತಿ ಬದುಕಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಯಾವುದೇ ತಪ್ಪು ಮಾಡದ ನನ್ನ ಮಗನನ್ನು ಕೂಡಲೇ ಬಿಡುಗಡೆ ಮಾಡಬೇಕು. ಈಗಾಗಲೇ ಗೌರಿ ಸಹೋದರಿ ಕವಿತಾ ಲಂಕೇಶ್ ಹಾಗೂ ಸಹೋದರ ಇಂದ್ರಜಿತ್ ಲಂಕೇಶ್ ಅವರಿಗೆ ಪತ್ರ ಬರೆಯಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News