ಕೊಡಗಿನ ನಿರಾಶ್ರಿತರ ನೆರವಿಗೆ ಕನ್ನಡ ಕ್ರಿಯಾ ಸಮಿತಿಯಿಂದ 25 ಸಾವಿರ ರೂ. ದೇಣಿಗೆ

Update: 2018-08-23 15:54 GMT

ಬೆಂಗಳೂರು, ಆ.23: ಕೊಡಗಿನಲ್ಲಿ ಮಳೆ ಹಾವಳಿಯಿಂದ ನಿರಾಶ್ರಿತಗೊಂಡಿರುವ ಸಂತ್ರಸ್ತರ ನೆರವಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ವತಿಯಿಂದ 25 ಸಾವಿರ ರೂ.ದೇಣಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಪರಿಹಾರ ನಿಧಿ ಪ್ರಕೃತಿ ವಿಕೋಪ-2018ಕ್ಕೆ ನೀಡಲಾಗಿದೆ. ಕೊಡಗಿನ ಜನತೆ ಜಿಲ್ಲೆಯಾದ್ಯಂತ ಸಂಚರಿಸಲು ಮೂರು ತಿಂಗಳುಗಳ ಕಾಲ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣಗೆ ಸಮಿತಿಯ ಅಧ್ಯಕ್ಷ ವ.ಚ.ಚನ್ನೇಗೌಡ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News