ವಾಜಪೇಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಗುಟರಸ್

Update: 2018-08-23 16:04 GMT

ವಿಶ್ವಸಂಸ್ಥೆ, ಆ.23: ಆಗಸ್ಟ್ 16ರಂದು ನಿಧನರಾದ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟರಸ್ ಶ್ರದ್ಧಾಂಜಲಿ ಸಲ್ಲಿಸಿದ್ದು, ವಾಜಪೇಯಿಯವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.

ವಿಶ್ವಸಂಸ್ಥೆಯಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿದ ಪ್ರಧಾನ ಕಾರ್ಯದರ್ಶಿ ಗುಟರಸ್ ಸಂತಾಪ ಸೂಚಕ ಸಂದೇಶವನ್ನು ಬರೆದರಲ್ಲದೆ , ಭಾರತದ ಮಾಜಿ ಪ್ರಧಾನಿಯವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡರು ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ರಾಯಭಾರಿಯಾಗಿರುವ ಸೈಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ. 1977ರಿಂದ 2003ರ ಅವಧಿಯಲ್ಲಿ ವಿದೇಶ ಸಚಿವರಾಗಿ ಮತ್ತು ಪ್ರಧಾನಿಯಾಗಿ ವಿಶ್ವಸಂಸ್ಥೆಯ ಕೇಂದ್ರಕಚೇರಿಗೆ 7 ಬಾರಿ ಭೇಟಿ ನೀಡಿದ್ದ ವಾಜಪೇಯಿಯವರು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಭಾಷಣ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News