ಬೆಂಗಳೂರು: ಗಂಧದ ಮರ ಕಳವು

Update: 2018-08-23 17:37 GMT

ಬೆಂಗಳೂರು, ಆ.23: ಇಲ್ಲಿನ ವಿಜಯನಗರದ ಸರಕಾರಿ ಕಾಲೇಜು ಹಾಗೂ ವಿಜಯನಗರದ ಕ್ಲಬ್‌ನಲ್ಲಿ ದುಷ್ಕರ್ಮಿಗಳು ಗಂಧದ ಮರ ಕಳವು ಮಾಡಿ ಪರಾರಿಯಾಗಿದ್ದಾರೆ.

ಕಳೆದ ಒಂದು ವಾರದಿಂದ ವಿಜಯನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ಗಂಧದ ಮರಗಳು ಕಳ್ಳತನವಾಗುತ್ತಿದ್ದು, ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ 10 ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ವಿಜಯನಗರವು ಒಂದಾಗಿದ್ದು, ಹಲವು ಮಂದಿ ಶಾಸಕರು ಇಲ್ಲಿ ವಾಸವಾಗಿದ್ದಾರೆ. ಆದರೂ ಕಳ್ಳವು ಪ್ರಕರಣ ಹೆಚ್ಚಾಗುತ್ತಿರುವುದರ ಬಗ್ಗೆ ಸ್ಥಳೀಯ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಪ್ರದೇಶದಲ್ಲಿ ಅಳವಡಿಸಿರುವ ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದನ್ನೆ ದುರ್ಬಳಕೆ ಮಾಡಿಕೊಳ್ಳುತ್ತಿರುವ ದುಷ್ಕರ್ಮಿಗಳು ನಿರಾತಂಕವಾಗಿ ಕಳ್ಳತನ ಮಾಡುತ್ತಿದ್ದಾರೆ ಎಂದು ಬೆಂಗಳೂರು ಕ್ಲಬ್‌ನ ಅಧ್ಯಕ್ಷರು ಆರೋಪಿಸಿದ್ದಾರೆ. ಪ್ರಕರಣಗಳನ್ನು ದಾಖಲಿಸಿಕೊಂಡಿರುವ ವಿಜಯನಗರ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News