ಸುಂಟಿಕೊಪ್ಪ: ಪುನರ್ವಸತಿ ಕೇಂದ್ರಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ

Update: 2018-08-23 18:52 GMT

ಸುಂಟಿಕೊಪ್ಪ,ಆ.23: ಸುಂಟಿಕೊಪ್ಪ ಸುತ್ತಲಿನ ಗ್ರಾಮಗಳಲ್ಲಿ ಸಂಭವಿಸಿದ ಭೀಕರ ಜಲಪ್ರಳಯದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಇಲ್ಲಿನ ಪುನರ್ವಸತಿ ಕೇಂದ್ರದಲ್ಲಿ ನೆಲೆಸಿರುವ ಸಂತ್ರಸ್ತರನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ದಿನೇಶ್ ಗುಂಡೂರರಾವ್, ರಾಜ್ಯ ಕಾರ್ಯದರ್ಶಿ ಈಶ್ವರ್ ಖಂಡ್ರೆ, ಮಾಜಿ ಸಚಿವ ವಿಜಯ ಶಂಕರ್ ಗುರುವಾರ ಭೇಟಿ ನೀಡಿ ಪುರ್ನವಸತಿ ಕೇಂದ್ರದಲ್ಲಿ ನೀಡಲಾಗುವ ಆಹಾರ ಪರಿಶೀಲಿಸಿ ಸಂತ್ರಸ್ತರ ಸಮಸ್ಯೆಯನ್ನು ಅವಲೋಕಿಸಿದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ಸರ್ಕಾರದ ಮಟ್ಟದಲ್ಲಿ ಪ್ರತಿ ಗ್ರಾಮದಲ್ಲಿ ಉಂಟಾದ ಅನಾಹುತಗಳು, ಆಸ್ತಿಪಾಸ್ತಿಗಳನ್ನು ಕಳೆದುಕೊಂಡವರ ಬಗ್ಗೆ ಮಾಹಿತಿಯನ್ನು ಕಲೆಹಾಕಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ. ರೈತರ ಸಾಲವನ್ನು ಕೂಡಲೆ ಮನ್ನಾ ಮಾಡಿದರೆ ತಕ್ಕಮಟ್ಟಿನ ಪರಿಹಾರ ದೊರಕಲಿದೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News