ಕಾಪು : ಹೆದ್ದಾರಿಯಲ್ಲಿ ವಾರದ ಸಂತೆ ತೆರವು

Update: 2018-08-24 17:12 GMT

ಕಾಪು, ಆ. 24 : ಕಾಪು ಪುರಸಭಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆಯುವ ವಾರದ ಸಂತೆಯಲ್ಲಿ ವ್ಯಾಪಾರಸ್ಥರು ಹೆದ್ದಾರಿ ಪಕ್ಕದಲ್ಲಿ ತರಕಾರಿ ಮಾರಾಟ ಮಾಡುತ್ತಿರುವುದನ್ನು ಪುರಸಭೆ ಶುಕ್ರವಾರ ತೆರವುಗೊಳಿಸಿದೆ.

ವಾರದ ಸಂತೆಯಲ್ಲಿ ವ್ಯಾಪಾರಸ್ಥರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಮಾರಾಟ ಮಾಡಲಾಗುತಿತ್ತು. ಇದರಿಂದ ಸರ್ವೀಸ್ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುತಿತ್ತು. ಇದನ್ನು ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಹಲವು ಭಾರಿ ಮನವಿ ಮಾಡಿದ್ದರು.

ಶುಕ್ರವಾರ ಪುರಸಭಾ ಮುಖ್ಯಾಧಿಕಾರಿ ರಾಯಪ್ಪ ದಾಳಿ ನಡೆಸಿ ತೆರವುಗೊಳಿಸಿ ಕಾಪು ಪುರಸಭಾ ಮಾರುಕಟ್ಟೆಯನ್ನು ಪಕ್ಕದ ಜಾಗಕ್ಕೆ ಸ್ಥಳಾಂತರಿಸಿದರು. ಕಾಪು ಪೊಲೀಸರು ತೆರವು ಕಾರ್ಯಾಚರಣೆಯುಲ್ಲಿ ಭಾಗಿಯಾಗಿದ್ದರು.

2 ವರ್ಷದಿಂದ ಹೆದ್ದಾರಿ ಪಕ್ಕದಲ್ಲಿ ಸಂತೆ ಹೆದಾರಿ ಪಕ್ಕದಲ್ಲಿ ಕಾರ್ಯಚರಿಸುತ್ತಿತ್ತು. ಗ್ರಾಮಸ್ಥರು ದೂರಿನ ಹಿನ್ನೆಲೆಯಲ್ಲಿ ಮಾರುಕಟ್ಟೆಯನ್ನು ಒಳಗಿನ ಜಾಗಕ್ಕೆ ಸ್ಥಳಾಂತರಿಸುತ್ತಿದ್ದೇವೆ. ಮುಂದಿನ ದಿನದಲ್ಲಿ ಜನರಿಗೆ ಹಾಗೂ ವ್ಯಾಪಾರಸ್ಥರಿಗೆ ಯಾವುದೇ ತೊಂದರೆ ಇಲ್ಲದಂತೆ ಕಾರ್ಯನಿರ್ವಹಿಸುತ್ತೇವೆ ಎಂದು ಪುರಸಭಾಧಿಕಾರಿ ರಾಯಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News