ಚಾಮರಾಜನಗರ: ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆ ಭಸ್ಮ

Update: 2018-08-24 18:42 GMT

ಚಾಮರಾಜನಗರ,ಆ.24: ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಮನೆ ಭಸ್ಮವಾದ ಘಟನೆ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಹೆಗ್ಗವಾಡಿ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಇರುವ ಹೆಗ್ಗವಾಡಿ ಗ್ರಾಮದ ನಾಗರಾಜುರವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲ ಸೋರಿಕೆಯನ್ನು ಗ್ಯಾಸ್ ಏಜೆನ್ಸಿ ಹುಡುಗರು ಪರೀಕ್ಷೆ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಅನಿಲ ಸ್ಫೋಟದಿಂದ ಉಂಟಾದ ಬೆಂಕಿ ಅನಾಹುತದಿಂದಾಗಿ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ನೆರೆ ಮನೆಯವರು ಬೆಂಕಿ ನಂದಿಸಿದ್ದರಿಂದ ಯಾವುದೇ ಪ್ರಾಣಪಾಯ ಸಂಭವಿಸಲಿಲ್ಲ. ಸಂತೇರಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಕಾರಣ ಏನೆಂದು ತನಿಖೆಯಿಂದ ಹೊರ ಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News