ಚಾಮರಾಜನಗರ: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

Update: 2018-08-25 12:42 GMT

ಚಾಮರಾಜನಗರ,ಆ.25: ಕಿಡ್ನಿ ವೈಪಲ್ಯದಿಂದ ಬೇಸತ್ತ ಆಟೋ ಚಾಲಕನೊಬ್ಬ ಚಾಮರಾಜನಗರ ಜಿಲ್ಲೆಯ ಬೆಂಡರವಾಡಿ ಕೆರೆಹೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಾಮರಾಜನಗರ ಮಹದೇಶ್ವರ ಬಡಾವಣೆಯ ನಿವಾಸಿ ನಾಗೇಶ್ (42) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ. ಅವರು ತನ್ನ ಎರಡು ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ಬೆಂಡರವಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News