ಸುಬ್ರಹ್ಮಣ್ಯ: ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Update: 2018-08-25 13:17 GMT

ಸುಬ್ರಹ್ಮಣ್ಯ, ಆ. 25: ಪದವಿ ಕಾಲೇಜಿನ ದ್ವಿತೀಯ ಬಿಬಿಎ ಪದವಿ ವಿದ್ಯಾರ್ಥಿನಿಯೊಬ್ಬಳು ಎಡಮಂಗಲದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.

ಕುಕ್ಕೆಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯದಲ್ಲಿ ದ್ವಿತೀಯ ಬಿಬಿಎ ಪದವಿ ವಿದ್ಯಾರ್ಥಿನಿ ಅನಿತಾ (19) ಆತ್ಮಹತ್ಯೆ ಮಾಡಿಕೊಂಡವರು. ಸುಳ್ಯ ತಾಲೂಕಿನ ಎಡಮಂಗಲ ಗ್ರಾಮದ ಹೇಮಳದ ಗಣೇಶ್ ಎಂಬವರ ಪುತ್ರಿಯಾಗಿರುವ ಅನಿತಾ ಮರಣ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಣೇಶ್ ಮತ್ತು ಅವರ ಪತ್ನಿ ವಿಶಾಲಾಕ್ಷಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ವಿದ್ಯಾರ್ಥಿನಿ ಹಲವು ವರ್ಷಗಳಿಂದ ಮೂರ್ಚೆ ರೋಗಕ್ಕೆ ತುತ್ತಾಗಿದ್ದರು. ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿತಾ ಕಾಲೇಜಿನಲ್ಲಿ ಹಲವು ಬಾರಿ ಮೂರ್ಚೆ ರೋಗಕ್ಕೆ ಒಳಗಾಗಿದ್ದು, ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News