ಬೆಂಗಳೂರಿನಿಂದ ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ರದ್ದು
Update: 2018-08-25 14:58 GMT
ಬೆಂಗಳೂರು, ಆ.25: ಬೆಂಗಳೂರಿನಿಂದ ಕೇರಳಕ್ಕೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಗಳನ್ನು (ಆ.27) ನಾಳೆಯಿಂದ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.
ಕೇರಳದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ಹದಗೆಟ್ಟಿರುವುದರಿಂದ, ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ, ಕಾಞಂಗಾಡ್, ಕೋಝಿಕ್ಕೋಡ್ಗೆ ಸಂಚರಿಸುವ ಹವಾನಿಯಂತ್ರಿತ, ಐರಾವತ ಹಾಗೂ ಐರಾವತ ಕ್ಲಬ್ ಕ್ಲಾಸ್ ಕೆಎಸ್ಸಾರ್ಟಿಸಿ ಬಸ್ಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.