ಮಂಗಳೂರು: ಎಐಸಿಸಿ ಕಾರ್ಯದರ್ಶಿಗೆ ಅಭಿನಂದನೆ

Update: 2018-08-26 14:27 GMT

ಮಂಗಳೂರು, ಆ.26: ಎಐಸಿಸಿ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿ ದ.ಕ. ಜಿಲ್ಲಾ ಕಾಂಗ್ರೆಸ್‌ಗೆ ರವಿವಾರ ಭೇಟಿ ನೀಡಿದ ಸಲೀಂ ಅಹ್ಮದ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದಿಸಲಾಯಿತು.

ಡಿಸಿಸಿ ಉಪಾಧ್ಯಕ್ಷ ಬಲರಾಜ್ ರೈ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಬಾವ, ಡಿಸಿಸಿ ಪದಾಧಿಕಾರಿಗಳಾದ ನೀರಜ್ ಪಾಲ್, ನಝೀರ್ ಬಜಾಲ್, ಪಕ್ಷದ ಮುಂಖಡ ತೇಜಸ್ವಿರಾಜ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News