ಬೆಂಗಳೂರು : 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

Update: 2018-08-26 17:07 GMT

ಬೆಂಗಳೂರು, ಆ.26: ಮನೆಗಳ ಬೀಗ ಒಡೆದು ಒಳನುಗ್ಗಿರುವ ದುಷ್ಕರ್ಮಿಗಳು 2.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಂದಿನಿ ಬಡಾವಣೆಯ ಸರಸ್ವತಿಪುರ ಮುಖ್ಯರಸ್ತೆಯ 4ನೆ ಕ್ರಾಸ್ ನಿವಾಸಿ ಗುರುಪ್ರಸಾದ್ ಅವರ ಮನೆಯಲ್ಲಿ ಳ್ಳತನವಾಗಿದೆ ಎಂದು ತಿಳಿದುಬಂದಿದೆ.

ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಗುರುಪ್ರಸಾದ್ ಮತ್ತು ಕುಟುಂಬಸ್ಥರು ಮನೆಯಲ್ಲಿ ಲಕ್ಷ್ಮೀ ದೇವಿ ಪ್ರತಿಷ್ಠಾಪಿಸಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ಹಣವನ್ನು ಇಟ್ಟು ಪೂಜೆ ಮಾಡಿದ್ದರು. ಶನಿವಾರ ಬೆಳಗ್ಗೆ 6.30ಕ್ಕೆ ಗುರುಪ್ರಸಾದ್ ಅವರು ಮನೆಗೆ ಬೀಗ ಹಾಕಿ ವಾಯುವಿಹಾರಕ್ಕೆ ತೆರಳಿ ಸುಮಾರು 7:30ರ ಸುಮಾರಿಗೆ ಬಂದು ನೋಡಿದಾಗ ನಗದು, ಚಿನ್ನಾಭರಣ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ದುಷ್ಕರ್ಮಿಗಳು ನಕಲಿ ಕೀ ಬಳಸಿ ಮನೆಯ ಒಳಗೆ ಹೋಗಿ ಈ ಕೃತ್ಯವೆಸಗಿ, ಪರಾರಿಯಾಗಿದ್ದಾರೆ. ಈ ಬಗ್ಗೆ ಗುರುಪ್ರಸಾದ್ ಅವರು ಮಹಾಲಕ್ಷ್ಮೀ ಲೇಔಟ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News