ಗುಂಡ್ಲುಪೇಟೆ: ರಸ್ತೆ ಅಪಘಾತಕ್ಕೆ ವ್ಯಕ್ತಿ ಬಲಿ
Update: 2018-08-27 12:05 GMT
ಗುಂಡ್ಲುಪೇಟೆ,ಆ.27: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೇಗೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ
ತಾಲೂಕಿನ ಹಳ್ಳದಮಾದಹಳ್ಳಿ ಗ್ರಾಮದ ವಾಸು(50) ಎಂಬವರು ತಮ್ಮ ಬೈಕಿನಲ್ಲಿ ಸ್ವಗ್ರಾಮಕ್ಕೆ ತೆರಳುವಾಗ, ಅಪರಿಚಿತ ವಾಹನ ಢಿಕ್ಕಿಹೊಡೆದಿದ್ದು, ಪರಿಣಾ, ಬೈಕ್ ಸವಾರ ವಾಸು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಬೇಗೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.