ಗಣೇಶ ಚತುರ್ಥಿ ಆಚರಣೆಗೆ ಷರತ್ತುಗಳ ವಿರುದ್ಧ ಪ್ರತಿಭಟನೆ

Update: 2018-08-27 14:42 GMT

ತಿರುನೆಲ್ವೆಲಿ(ತ.ನಾ),ಆ.27: ಮುಂದಿನ ತಿಂಗಳು ನಡೆಯಲಿರುವ ಗಣೇಶ ಚತುರ್ಥಿ ಆಚರಣೆಗೆ ಷರತ್ತುಗಳನ್ನು ವಿಧಿಸಿರುವುದನ್ನು ವಿರೋಧಿಸಿ ಹಿಂದು ಮುನ್ನಾಣಿ ಕಾರ್ಯಕರ್ತರ ಗುಂಪೊಂದು ಸೋಮವಾರ ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿತು.

ಬಳಿಕ ಸಂಘಟನೆಯ ನಿಯೋಗವೊಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳ ಅಹವಾಲನ್ನು ಸಲ್ಲಿಸಿತು.

ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಹಬ್ಬಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿಯನ್ನು ಪಡೆದುಕೊಳ್ಳುವಂತೆ ಅನಗತ್ಯ ನಿರ್ಬಂಧಗಳನ್ನು ಹೇರಿದ್ದಾರೆಂದು ಆರೋಪಿಸಿದ ನಿಯೋಗವು,ಅವುಗಳನ್ನು ಸಡಿಲಿಸುವಂತೆ ಆಗ್ರಹಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News